ಈ ಬಗ್ಗೆ ಮಾತನಾಡಿರುವ ಪ್ರತಿಭಟನಾ ನಿರತ ವೈದ್ಯರ ವಕ್ತಾರ ಅರಿಂದಮ್ ದತ್ತಾ ಅವರು, ಸಿಎಂ ಮಮತಾ ಬ್ಯಾನರ್ಜಿ ಅವರು ಸಂಧಾನಸಭೆ ಕರೆದಿರುವುದು ಒಳ್ಳೆಯ ವಿಚಾರವೇ.. ನಾವೂ ಕೂಡ ಸಚಿವಾಲಯಕ್ಕೆ ತೆರಳಿ ಸಂಧಾನಸಭೆಯಲ್ಲಿ ಮಾತನಾಡುತ್ತೇವೆ. ಆದರೆ ಅದಕ್ಕಿಂತ ಮೊದಲು ಮಮತಾ ಬ್ಯಾನರ್ಜಿ ಅವರು, ನಿಲ್ ರತನ್ ಸರ್ಕಾರ್ ವೈದ್ಯಕೀಯ ಕಾಲೇಜಿಗೆ ಬಂದು ವೈದ್ಯರನ್ನು ಉದ್ದೇಶಿಸಿ ಬೇಷರತ್ ಕ್ಷಮೆ ಕೇಳಬೇಕು. ಆಗ ನಾವು ಸಂಧಾನ ಸಭೆಗೆ ಬರುತ್ತೇವೆ ಎಂದು ಹೇಳಿದ್ದಾರೆ.