ಆಂಧ್ರ ಪ್ರದೇಶದ ಹಿಂದಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ದುರಾಡಳಿತ ಹಾಗೂ ಸಂಸ್ಥೆಗಳ ಭ್ರಷ್ಟಾಚಾರವನ್ನು ಟೀಕಿಸಿದ ಜಗನ್, ಆಂಧ್ರ ಪ್ರದೇಶದಲ್ಲಿ ನಿರುದ್ಯೋಗ ಪ್ರಮಾಣ ಅಧಿಕವಾಗಿದ್ದು, ಮೂಲಸೌಕರ್ಯ ಹಾಗೂ ಕೈಗಾರಿಕಾ ರಂಗದಲ್ಲಿ ಹೂಡಿಕೆ ಕೊರತೆ ಇದೆ. ಸಾರ್ವಜನಿಕ ಶಿಕ್ಷಣ ಹಾಗೂ ಆರೋಗ್ಯ ವ್ಯವಸ್ಥೆ ಕುಸಿದಿದ್ದು, ಬೊಕ್ಕಸ ಬರಿದಾಗಿದೆ ಎಂದು ವಿವರಿಸಿದರು.