ಜೂನ್ 10 ರಂದು 80 ವರ್ಷ ವಯಸ್ಸಿನ ರೋಗಿಯೊಬ್ಬರನ್ನು ಚಿಕಿತ್ಸೆಗೆಂದು ದಾಖಲಿಸಲಾಗಿತ್ತು. ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಆದರೆ ಅವರ ಸಾವಿಗೆ ಕಿರಿಯ ವೈದ್ಯರೊಬ್ಬರ ನಿರ್ಲಕ್ಶ್ಯವೇ ಕಾರಣ ಎಂದು ದೂರಿ, ರೋಗಿಯ ಸಂಬಂಧಿಗಳು ಪರಿಬೊನೊ ಮುಖರ್ಜಿ ಎಂಬ ವೈದ್ಯರ ಮೇಲೆ ದಾಳಿ ನಡೆಸಿದ್ದರು. ಇದರಿಂದಾಗಿ ತೀವ್ರವಾಗಿ ಗಾಯಗೊಂಡ ವೈದ್ಯರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಸಹಜವಾಗಿ ಸಂಭವಿಸಿದ ಘಟನೆಗೆ, ವೈದ್ಯರನ್ನು ಹೊಣೆಯಾಗಿಸುವುದು ಸರಿಯಲ್ಲ, ಆಸ್ಪತ್ರೆಯ ಹಾಸ್ಟೆಲ್ ಆವರಣದಲ್ಲೇ ವೈದ್ಯರ ಮೇಲೆ ದಾಳಿ ನಡೆಯುತ್ತಿದ್ದರೂ ವೈದ್ಯರ ರಕ್ಷಣೆಗೆ ಯಾರೂ ಇರಲಿಲ್ಲ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಭದ್ರತೆ ಒದಗಿಸಬೇಕು ಎಂಬುದು ವೈದ್ಯರ ಒತ್ತಾಯ.