ಉನ್ನತ ಗುಪ್ತಚರ ಮೂಲಗಳು ನೀಡಿರುವ ಮಾಹಿತಿ ಪ್ರಕಾರ, ನೇಪಾಳ ಮೂಲಕ ಉಗ್ರಗಾಮಿಗಳು ಉತ್ತರ ಪ್ರದೇಶವನ್ನು ಪ್ರವೇಶಿಸಿ ಸಾರ್ವಜನಿಕ ಸ್ಥಳಗಳು, ರೈಲ್ವೆ, ಬಸ್ ನಿಲ್ದಾಣಗಳ ಮೇಲೆ ದಾಳಿ ನಡೆಸುವ ಸಾಧ್ಯತೆಯಿದ್ದು ಅತ್ಯಧಿಕ ಪ್ರಮಾಣದಲ್ಲಿ ಜೀವಹಾನಿಯನ್ನುಂಟುಮಾಡುವ ಸಾಧ್ಯತೆಯಿದೆ. ಈ ರೀತಿ ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯನ್ನು ಆಧರಿಸಿ ಅಯೋಧ್ಯೆಗೆ ಬರುವ ರೈಲು ಮತ್ತು ಬಸ್ಸುಗಳಲ್ಲಿ, ಹೊಟೇಲ್, ನಗರದ ಜನನಿಬಿಡ ಪ್ರದೇಶಗಳು, ಲಾಡ್ಜ್ ಗಳು ಮತ್ತು ಅತಿಥಿ ಗೃಹಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ.