"ನಾವು ವಾಸ ಮಾಡುತ್ತಿರುವ ಪ್ರದೇಶದಲ್ಲಿ ನೀರಿನಲ್ಲಿ ಉಪ್ಪಿನ ಅಂಶ ಹೆಚ್ಚಾಗಿದೆ. ಸಮಸ್ಯೆ ಬಗೆಹರಿಸುವುದಕ್ಕೆ ಸರ್ಕಾರಿ ಕಚೇರಿಗಳಿಗೆ ತಿರುಗುತ್ತೇನೆ ಆದರೂ ಯಾವುದೇ ಪ್ರಯೋಜನವಾಗಿಲ್ಲ. ಈ ನೀರನ್ನು ಕುಡಿಯುವುದಕ್ಕೆ ನಮಗೆ ಸಾಧ್ಯವಾಗುತಿಲ್ಲ, ಈ ನೀರಿನಿಂದ ಬೆಳೆಗಳೂ ಹಾಳಾಗುತ್ತಿವೆ. ಬಾಟಲ್ ನೀರನ್ನು ಪ್ರತಿ ನಿತ್ಯ ಕೊಳ್ಳುವಷ್ಟು ಆರ್ಥಿಕ ಶಕ್ತಿ ನಮ್ಮಲ್ಲಿ ಇಲ್ಲ. ಈ ಕಾರಣಕ್ಕಾಗಿ ನಾವು ನಮ್ಮ ಜೀವ ಕಳೆದುಕೊಳ್ಳುವುದಕ್ಕೆ ತೀರ್ಮಾನಿಸಿದ್ದೇವೆ, ದಯಾಮರಣ ಕೋರಿ ಪ್ರಧಾನಿಗೆ ಪತ್ರಬರೆದಿದ್ದೇವೆ ಎಂದು ಚಂದ್ರಪಾಲ್ ಸಿಂಗ್ ಹೇಳಿದ್ದಾರೆ.