ವೈದ್ಯರ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ವೈದ್ಯರೊಂದಿಗೆ ಸಂಧಾನ ಸಭೆಗೆ ಮುಂದಾಗಿದ್ದಾರೆಯಾದರೂ, ಸರ್ಕಾರದ ಸಂಧಾನಸಭೆ ಕುರಿತು ವೈದ್ಯರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಆರಂಭದಲ್ಲಿ ಬಂಗಾಳ ಸಚಿವಾಲಯದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತಾದರೂ, ಬಳಿಕ ಅಧಿಕಾರಿಗಳು ತಾವು ಹೇಳುವ ಜಾಗದಲ್ಲೇ ಸಂಧಾನಸಭೆ ನಡೆಯಬೇಕು ಎಂದು ಬೇಡಿಕೆ ಇರಿಸಿದ್ದಾರೆ. ಹೀಗಾಗಿ ಸರ್ಕಾರದಿಂದ ಸಂಧಾನಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಯುತ್ತಿಲ್ಲ ಎಂದು ಕಿಡಿಕಾರಿದ್ದಾರೆ.