ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೂ.30 ರಂದು ಅಮರನಾಥ ಯಾತ್ರೆಗೆ ತೆರಳಲಿದ್ದಾರೆ.
ಜು.1 ರಿಂದ ಕಣಿವೆ ರಾಜ್ಯದಲ್ಲಿ ಅಧಿಕೃತವಾಗಿ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಗೃಹ ಸಚಿವರಾದ ನಂತರ ಜಮ್ಮು-ಕಾಶ್ಮೀರಕ್ಕೆ ಅಮಿತ್ ಶಾ ಅವರ ಮೊದಲ ಭೇಟಿ ಇದಾಗಿರಲಿದೆ.
ಶ್ರೀನಗರದಲ್ಲಿ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಹಿರಿಯ ಸೇನಾ ಅಧಿಕಾರಿಗಳು, ರಾಜ್ಯ ಪೊಲೀಸ್ ಅಧಿಕಾರಿಗಳು, ಅರೆ ಸೇನಾ ಪಡೆಗಳ ಅಧಿಕಾರಿಗಳು, ಕೇಂದ್ರ, ರಾಜ್ಯ ಗುಪ್ತಚರ ಇಲಾಖೆ ಅಧಿಕಾರಿಗಳು ಭಾಗಿಯಾಗಲಿದ್ದಾರೆ.