ಗುರುವಾರ ವೈದ್ಯ ಸಮುದಾಯದ ಜತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೊದಲಿಗೆ ಮುಷ್ಕರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು. ಬಳಿಕ 4 ಗಂಟೆಗಳ ಗಡುವು ವಿಧಿಸಿ ಅಷ್ಟರೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೈದ್ಯ ವಿದ್ಯಾರ್ಥಿಗಳನ್ನು ಹಾಸ್ಟೆಲ್ಗಳಿಂದ ತೆರವುಗೊಳಿಸಬೇಕಾದೀತು ಎಂದೂ ಬೆದರಿಕೆಯನ್ನೂ ಒಡ್ಡಿದ್ದರು. ಇದರಿಂದ ವೈದ್ಯ ಸಮುದಾಯ ಮತ್ತಷ್ಟು ಕೆರಳಿ ಪ್ರತಿಭಟನೆ ತೀವ್ರಗೊಳಿಸಿದೆ.