ಪೊಲೀಸರ ವರ್ತನೆಯಿಂದ ಆಕ್ರೋಶಗೊಂಡ ರಾಜಾ ಸಿಂಗ್ ಅವರು ತಮ್ಮ ಕೈಯಲ್ಲಿದ್ದ ಕಲ್ಲಿನಿಂದ ತಲೆಗೆ ಬಡಿದುಕೊಂಡ ಪರಿಣಾಮ ತಲೆ ಭಾಗದಲ್ಲಿ ಗಂಭೀರ ಗಾಯವಾಗಿದ್ದು, ಅವರನ್ನು ಓಸ್ಮಾನಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಚಿಕಿತ್ಸೆಯ ಬಳಿಕ ಇಂದು ಬೆಳಗ್ಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.