ಮುಜಾಫರನಗರ್: ಮನೆಯ ಹೊರಗಡೆ ಇದ್ದ 16 ವರ್ಷದ ಬಾಲಕಿಯನ್ನು ಅಪಹರಿಸಿ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮುಜಾಫರನಗರ್ ಜಿಲ್ಲೆಯಲ್ಲಿ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಗುರುವಾರ ಈ ಹೀನ ಕೃತ್ಯ ನಡೆದಿದ್ದು, ತಿತವಿ ಪೊಲೀಸ್ ಠಾಣಾ ವ್ಯಾಪ್ತಿಯ ಬಘ್ರಾ ಗ್ರಾಮದ ಖಾಲಿ ಮನೆಯೊಂದರಲ್ಲಿ ಬಾಲಕಿ ಪತ್ತೆಯಾಗಿದ್ದು, ಆಕೆಯ ಕೈ ಕಟ್ಟಿಹಾಕಿ, ಬಾಯಿಗೆ ಬಟ್ಟೆ ತುರುಕಲಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ನಾಲ್ವರು ಕಾಮುಕರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಠಾಣಾ ಅಧಿಕಾರಿ ಎಸ್ ಕುಮಾರ್ ಅವರು ತಿಳಿಸಿದ್ದಾರೆ.
ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದು, ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಬಘ್ರ ಪೊಲೀಸ್ ಔಟ್ ಪೋಸ್ಟ್ ಅಧಿಕಾರಿ ಜಿತೇಂದ್ರ ಪನ್ವಾರ್ ಅವರನ್ನು ಅಮಾನತುಗೊಳಿಸಲಾಗಿದೆ.