ಕಮಲ್ ನಾಥ್ ಅವರು ಯೋಗ ದಿನಾಚರಣೆಯಲ್ಲಿ ಭಾಗವಹಿಸುವ ಮೂಲಕ ರಾಜ್ಯದ ಜನರಿಗೆ ಯೋಗ ಅಭ್ಯಾಸ ಮಾಡಿ ಆರೋಗ್ಯ ಉತ್ತಮವಾಗಿರಿಸಿಕೊಳ್ಳಲು ಉತ್ತೇಜನ ನೀಡಬಹುದಾಗಿತ್ತು. ಓರ್ವ ಮುಖ್ಯಮಂತ್ರಿಯ ಕೆಲಸ ಕೇವಲ ಆಡಳಿತವಷ್ಟೇ ಅಲ್ಲ, ರಾಜ್ಯಕ್ಕೆ ಮಾರ್ಗದರ್ಶನ ನೀಡುವುದೂ ಹೌದು, ಆದರೆ ಕಮಲ್ ನಾಥ್ ಅವರ ಇಂದಿನ ನಡೆ ಅವರ ಸಂಕುಚಿತ ಮನಸ್ಥಿತಿಯನ್ನು ತೋರುತ್ತದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.