ಕಳೆದ ಐದು ವರ್ಷಗಳಲ್ಲಿ 2ಜಿ ಹಗರಣ ಮತ್ತು ಕಲ್ಲಿದ್ದಲು ಹಗರಣದಲ್ಲಿ ಒಬ್ಬರಿಗಾದರೂ ಹಿಡಿಯಲು ನಿಮ್ಮಿಂದ ಸಾಧ್ಯವಾಯಿತೇ? ನೀವು ಚುನಾವಣಾ ಪ್ರಚಾರದಲ್ಲಿ ಸೋನಿಯಾ ಹಾಗೂ ರಾಹುಲ್ ಗಾಂಧಿಯನ್ನು ಚೋರ್ ಎಂದು ಕರೆದು ಅಧಿಕಾರಕ್ಕೇರಿದಿರಿ. ಆದರೆ 2ಜಿ ಹಗರಣ, ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಜೈಲಿಗೆ ಕಳುಹಿಸಲು ನಿಮ್ಮಿಂದ ಸಾಧ್ಯವಾಯಿತೇ? ನೀವು ಅವರನ್ನು ಕಳ್ಳರು ಎಂದಿದ್ದೀರಿ, ಹಾಗಾದ್ರೆ ಅವರೇಕೆ ಇಂದು ಸಂಸತ್ತಿನಲ್ಲಿ ಕುಳಿತಿದ್ದಾರೆ?' ಎಂದು ಅಧಿರ್ ರಂಜನ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಕಾರವಾಗಿ ಪ್ರಶ್ನಿಸಿದ್ದಾರೆ.