“ಬೆಳೆ ವಿಮೆ ಕುರಿತು ಸಲಹೆ ನೀಡುವಂತೆ ಸೂಚಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೋಮವಾರ ಪತ್ರ ಬರೆಯಲಾಗಿದ್ದು, ಬೇಡಿಕೆಗಳನ್ನು ಪರಿಶೀಲಿಸುವ ಪ್ರಕ್ರಿಯೆಯಲ್ಲಿ ಸರ್ಕಾರ ತೊಡಗಿದೆ” ಎಂದು ಪಂಚಾಯತ್ ರಾಜ್, ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವ ಪರ್ಷೋತ್ತಮ್ ಖೋಡಭಾಯ್ ರೂಪಾಲ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದ್ದಾರೆ.