ಈ ಹಿಂದೆ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಗುಜರಾತ್ ನಿಂದ ನಡೆಯಲಿರುವ ಚುನಾವಣೆಯನ್ನು ಪ್ರತ್ಯೇಕವಾಗಿ ನಡೆಸುವ ಚುನಾವಣಾ ಆಯೋಗದ ತೀರ್ಮಾನವನ್ನು ಪ್ರಶ್ನಿಸಿ, ಕಾಂಗ್ರೆಸ್ನ ಗುಜರಾತ್ ಘಟಕವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಗೃಹ ಸಚಿವ ಅಮಿತ್ ಶಾ ಮತ್ತು ಸಚಿವೆ ಸ್ಮೃತಿ ಇರಾನಿ ಅವರು ಲೋಕಸಭೆಗೆ ಆಯ್ಕೆಯಾಗಿದ್ದರಿಂದ ಈ ಸ್ಥಾನಗಳು ತೆರವಾಗಿದ್ದು, ಈ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿತ್ತು.