ಈ ನಡುವೆ ಕೊಡಿಯೇರಿ ಬಾಲಕೃಷ್ಣನ್ ಮಾತನಾಡಿ, ಕುಟುಂಬದ ತಪ್ಪಿಗೆ ಪಕ್ಷ ಜವಾಬ್ದಾರವಲ್ಲ ಎಂದು ಹೇಳಿದ್ದಾರೆ. ತನ್ನ ಮಗನ ರಕ್ಷಣೆಗೆ ತಾವು ಯಾವ ಪ್ರಯತ್ನ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬಿನೊಯ್ ವಯಸ್ಕನಾಗಿರುವುದರಿಂದ, ಮೇಲಾಗಿ ಈ ವಿಷಯ ನ್ಯಾಯಾಲಯದಲ್ಲಿರುವುದರಿಂದ ಅವರ ವೈಯಕ್ತಿಕ ಜೀವನದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಹೇಳಿದ್ದಾರೆ.