ಪ್ರತಿಭಟನೆಗೆ ಅನುಮತಿ ನೀಡದ ಪೊಲೀಸರ ಕ್ರಮ ಪ್ರಶ್ನಿಸಿ ಎನ್ ಜಿಒ ವೊಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು, ಸರ್ಕಾರ ಪ್ರತಿಭಟನೆಗಳನ್ನು ತಡೆಯುವ ಬದಲು ಜಲಮೂಲಗಳ ಸಂರಕ್ಷಣೆಯಲ್ಲಿ ಆಸಕ್ತಿ ಹೊಂದಿರುವ ಸಂಘ, ಸಂಸ್ಥೆಗಳೊಂದಿಗೆ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ.