ವಂದೇ ಮಾತರಂ, ಜೈ ಶ್ರೀರಾಮ್ ಹೇಳಲು ನಿರಾಕರಿಸುತ್ತಿರುವ ಕಾರಣ ಮುಸ್ಲಿಮರಲ್ಲಿ ಭಯ ಹುಟ್ಟಿಸಲಾಗುತ್ತಿದೆ. ಥಳಿಸಲಾಗುತ್ತಿದೆ, ಧಾರ್ಮಿಕ ಘೋಷಣೆ ಕೂಗಲು ನಿರಾಕರಿಸುವ ಕಾರಣಕ್ಕೆ ಮುಸ್ಲಿಮರ ವಿರುದ್ಧ ದ್ವೇಷ ಹರಡಲಾಗುತ್ತಿದೆ. ಇವೆಲ್ಲವೂ ಆರ್ ಎಸ್ ಎಸ್-ಬಿಜೆಪಿಯವರ ಆಣತಿ ಮೇರೆಗೆ ನಡೆಯುತ್ತಿದೆ ಎಂದು ಓವೈಸಿ ಹೇಳಿದ್ದಾರೆ.