ಸೆಲ್ಫಿ ತೆಗೆದುಕೊಳ್ಳುವಾಗ ಕಾಲು ಜಾರಿ ಗಂಗಾ ನದಿಗೆ ಬಿದ್ದು ಮೂವರ ದುರ್ಮರಣ!

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಗಂಗಾ ನದಿಗೆ ಬಿದ್ದು ಮೂವರು ಸ್ನೇಹಿತರು ದಾರುಣ ಸಾವನ್ನಪ್ಪಿರುವ ಘಟನೆ ರಿಷಿಕೇಶದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಸೂರತ್: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲು ಜಾರಿ ಗಂಗಾ ನದಿಗೆ ಬಿದ್ದು ಮೂವರು ಸ್ನೇಹಿತರು ದಾರುಣ ಸಾವನ್ನಪ್ಪಿರುವ ಘಟನೆ ರಿಷಿಕೇಶದಲ್ಲಿ ನಡೆದಿದೆ.
ಸೂರತ್ ಮೂಲದ ಮೂವರು ಸ್ನೇಹಿತರು ಉತ್ತರಖಂಡದ ಚಾರ್ದಾಮ್ ಯಾತ್ರ ಕೈಗೊಂಡಿದ್ದರು. ರಿಷಿಕೇಶದ ಬಳಿ ತೆಪ್ಪಾದಲ್ಲಿ  ಹೋಗುತ್ತಿದ್ದಾಗ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು ಈ ವೇಳೆ ತೆಪ್ಪಾ ಉರುಳಿ ಮೂವರು ನದಿಗೆ ಬಿದ್ದು ಜಲ ಸಮಾಧಿಯಾಗಿದ್ದಾರೆ.
ಇನ್ನು ನೀರಿನಲ್ಲಿ ಮುಳುಗಿ ಮೃತಪಟ್ಟಿರುವವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com