ವಿಂಗ್ ಕಮಾಂಡರ್ ಅಭಿನಂದನ್‌ ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್

ಪಾಕಿಸ್ತಾನದಿಂದ ಶುಕ್ರವಾರ ಸಂಜೆ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್...
ನಿರ್ಮಲಾ ಸೀತಾರಾಮನ್, ಅಭಿನಂದನ್ ವರ್ಧಮಾನ್
ನಿರ್ಮಲಾ ಸೀತಾರಾಮನ್, ಅಭಿನಂದನ್ ವರ್ಧಮಾನ್
ನವದೆಹಲಿ: ಪಾಕಿಸ್ತಾನದಿಂದ ಶುಕ್ರವಾರ ಸಂಜೆ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಶನಿವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ಮಾಡಿದ್ದಾರೆ.
ಸದ್ಯ ದೆಹಲಿಯ ಭಾರತೀಯ ವಾಯುಪಡೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಭಿನಂದನ್ ವರ್ಧಮಾನ್‌ ಅವರನ್ನು ನಿರ್ಮಲಾ ಸೀತಾರಾಮನ್ ಅವರು ಭೇಟಿ ಮಾಡಿದ್ದು, ಸುಮಾರು 60 ಗಂಟೆಗಳ ಪಾಕಿಸ್ತಾನದಲ್ಲಿದ್ದ ವೇಳೆ ನಡೆದ ಘಟನೆಗಳನ್ನು ವಿವರಿಸಿದ್ದಾರೆ ಎನ್ನಲಾಗಿದೆ.
ರಕ್ಷಣಾ ಸಚಿವೆಯ ಜತೆ ವಾಯುಪಡೆಯ ಹಿರಿಯ ಅಧಿಕಾರಿಗಳು ಸಹ ಇದ್ದರು.
ಇಂದು ಬೆಳಗ್ಗೆಯಷ್ಟೇ ಅಭಿನಂದನ್ ಅವರು ವಾಯುಪಡೆ ಮುಖ್ಯಸ್ಥ ಬಿ.ಎಸ್‌.ಧನೋಹಾರನ್ನು ಭೇಟಿಯಾಗಿದ್ದು, ಪಾಕಿಸ್ತಾನದಲ್ಲಿ ತಾನು ಸೆರೆಯಾಗಿದ್ದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಅಭಿನಂದನ್ ವರ್ಧಮಾನ್‌ ಅವರು ಆಸ್ಪತ್ರೆಯಲ್ಲಿ ಇನ್ನೂ ಹಲವು ಪರೀಕ್ಷೆಗಳಿಗೆ ಒಳಪಡಬೇಕಿದ್ದು, ಭಾನುವಾರದವರೆಗೆ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com