ಶುಕ್ರವಾರ ರಾತ್ರಿ ವಾಘಾ ಗಡಿಯಿಂದ ಅಭಿನಂದನ್ ಅವರನ್ನು ಪಾಕಿಸ್ತಾನ ಭಾರತಕ್ಕೆ ಹಸ್ತಾಂತರಿಸಿತ್ತು. ನಂತರ ಭಾರತೀಯ ವಾಯುಸೇನೆ ಅಧಿಕಾರಿಗಳು ಅವರನ್ನು ಅಮೃತಸರದಿಂದ ವಿಮಾನದಲ್ಲಿ ದೆಹಲಿಗೆ ಕರೆತಂದಿದ್ದರು. ರಾತ್ರಿ 11.45ಕ್ಕೆ ದೆಹಲಿಗೆ ತಲುಪಿದ ಅಭಿನಂದನ್ ಅವರೊಂದಿಗೆ ಭಾರತೀಯ ವಾಯುಪಡೆ ಅಧಿಕಾರಿಗಳು, ಗುಪ್ತಚರ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿದರು.