ಇನ್ನು ಪುಲ್ವಾಮ ದಾಳಿ ಬಳಿಕ ಪಾಕಿಸ್ತಾನಕ್ಕೆ ಏರ್ ಸ್ಟ್ರೈಕ್ ಮೂಲಕ ಮುಟ್ಟಿನೋಡಿಕೊಳ್ಳುವಂತೆ ಭಾರತ ತಿರುಗೇಟು ನೀಡಿತ್ತು. ಆದರೆ ಈ ದಾಳಿ ಬಳಿಕ ಗಡಿಯಲ್ಲಿ ಪಾಕಿಸ್ತಾನ ಸೇನೆ ತನ್ನ ದಾಳಿ ಪ್ರಮಾಣವನ್ನು ಹೆಚ್ಚಿಸಿದ್ದು. ಗಡಿಯಲ್ಲಿ ಅಕ್ಷರಶಃ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಗಡಿಗ್ರಾಮಗಳನ್ನು ಕ್ರಮೇಣ ತೆರವುಗೊಳಿಸಲಾಗುತ್ತಿದ್ದು, ಪಾಕಿಸ್ತಾನದ ಶೆಲ್ಲಿಂಗ್ ಗೆ ನೂರಾರು ಮನೆಗಳು ಧ್ವಂಸಗೊಂಡಿವೆ.