ಇದೀಗ ಅಮಿತ್ ಶಾ ಅವರ ಈ ಹೇಳಿಕೆ ವಿಪಕ್ಷಗಳ ಟೀಕಾ ಪ್ರಹಾರಕ್ಕ ಕಾರಣವಾಗಿದ್ದು, ವಿಪಕ್ಷ ಮುಖಂಡರು ಅಮಿತ್ ಶಾ ಅವರ ಹೇಳಿಕೆಯನ್ನು ತೀಕ್ಷ್ಣವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಅವರು, ಪ್ರಧಾನಿ ಮೋದಿ ಮತ್ತು ಬಿಜೆಪಿ ಉಗ್ರ ದಾಳಿಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆಯೇ ಎಂದು ಕಿಡಿಕಾರಿದರು. ಬಾಲಾಕೋಟ್ ಉಗ್ರ ದಾಳಿ ಕುರಿತು ಅಂತಾರಾಷ್ಟ್ರೀಯ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿದ ಅವರು, ವಿದೇಶಿ ಮಾಧ್ಯಮಗಳು ಪಾಕ್ ಪರ ನಿಲುವು ಹೊಂದಿವೆಯೇ... ವಾಯುದಾಳಿಯಲ್ಲಿ ಸಾವುನೋವು ಸಂಭವಿಸಿಲ್ಲ ಎಂದು ವರದಿ ಮಾಡುತ್ತಿವೆ. ಈ ಬಗ್ಗೆ ಪ್ರಧಾನಿ ಮೋದಿ ಏಕೆ ಮೌನವಾಗಿದ್ದಾರೆ. ಒಂದೋ ವಿದೇಶಿ ಮಾಧ್ಯಮಗಳು ಪಾಕಿಸ್ತಾನದ ಪರವಾಗಿರಬೇಕು, ಇಲ್ಲವೇ ವಾಯುದಾಳಿ ಸಂಬಂಧ ಮೋದಿ ಹಾಗೂ ಬಿಜೆಪಿ ಸುಳ್ಳು ಹೇಳುತ್ತಿರಬೇಕು ಎಂದು ಕಿಡಿಕಾರಿದ್ದಾರೆ.