ಇದೇ ವೇಳೆ ಫೆಬ್ರವರಿ 26ರ ವೈಮಾನಿಕ ದಾಳಿಯ ಸಾಕ್ಷ್ಯ ಕೇಳುತ್ತಿರುವ ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ ಪ್ರಧಾನಿ, ಭಯೋತ್ಪಾದನೆ ಅಂತ್ಯಗೊಳಿಸುವುದು ನಮ್ಮ ಉದ್ದೇಶ. ಆದರೆ ಕಾಂಗ್ರೆಸ್ ಸೇನಾ ಕಾರ್ಯಾಚರಣೆಯನ್ನು ಅನುಮಾನಿಸುತ್ತಿದೆ. ಅಲ್ಲದೆ ಸೇನೆ ನೀಡಿದ ಮಾಹಿತಿಯ ಬಗ್ಗೆ ಶಂಕಿಸುತ್ತಿದೆ. ಇಡೀ ದೇಶವೇ ಉಗ್ರರ ಮೇಲೆ ನಡೆದ ದಾಳಿಗೆ ಬೆಂಬಲ ಸೂಚಿಸಿದೆ. ಯೋಧರ ಬಲಿದಾನಕ್ಕೆ ಸೂಕ್ತ ಉತ್ತರ ನೀಡಿರುವುದಾಗಿ ಜನ ನಂಬಿದ್ದಾರೆ ಎಂದರು.