ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಒತ್ತಾಯದ ಮೇರೆಗೆ ರಾಹುಲ್ ಗಾಂಧಿ ಅವರು ಎಎಪಿಯೊಂದಿಗೆ ಕೈಜೋಡಿಸುವ ಕುರಿತು ಸದಸ್ಯರ ಅಭಿಪ್ರಾಯ ಕೇಳಿದ್ದರು. ಈಗಾಗಲೇ ಎರಡೂ ಪಕ್ಷಗಳ ಸದಸ್ಯರು ಮೈತ್ರಿಯ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. ಎಎಪಿ ಈಗಾಗಲೇ ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಆದರೆ, ಎಎಪಿ ಸಂಚಾಲಕ ಅರವಿಂದ ಕೇಜ್ರೀವಾಲ್ ಮಾತ್ರ ಮಹಾಮೈತ್ರಿಯ ಭಾಗವಾಗುವ ಇಚ್ಛೆ ವ್ಯಕ್ತಪಡಿಸಿದ್ದಾರೆ.