ಲಖನೌ: ತಮ್ಮ ಪಕ್ಷದ ಕಾರ್ಯಕರ್ತರ ಎದುರೇ ಬಿಜೆಪಿ ಮುಖಂಡರಿಬ್ಬರು ಕೈ ಕೈ ಮಿಲಾಯಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಸಂತ ಕಬೀರ್ ನಗರದ ರಸ್ತೆಯೊಂದರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಾಮಫಲಕದಲ್ಲಿ ತಮ್ಮ ಹೆಸರಿಲ್ಲ ಎನ್ನುವ ಕಾರಣದಿಂದ ಆಕ್ರೋಶಗೊಂಡ ಬಿಜೆಪಿ ಸಂಸದ ಶರದ್ ತ್ರಿಪಾಠಿ ತಮ್ಮದೇ ಪಕ್ಷದ ಶಾಸಕರಾದ ರಾಕೇಶ್ ಭಾಘೇಲ್ ಎನ್ನುವವರ ಮೇಲೆ ಹಲ್ಲೆ ಮಾಡಿದ್ದಾರೆ.
ಇಬ್ಬರೂ ನಾಯಕರ ನಡುವೆ ಮಾತಿಗೆ ಮಾತು ಬೆಳೆದು ಈ ವೇಳೆ ಸಂಸದ ತ್ರಿಪಾಠಿ ತಮ್ಮ ಬೂಟಿನಿಂದ ಶಾಸಕರನ್ನು ಹಿಗ್ಗಾಮುಗ್ಗಾ ಹೊಡೆದಿದ್ದಾರೆ. ಇದರಿಂದ ಕೋಪಗೊಂಡ ಶಾಸಕ ರಾಕೇಶ್ ಸಹ ಸಂಸದರಿಗೆ ಥಳಿಸಿದ್ದಾರೆ.
#WATCH Sant Kabir Nagar: BJP MP Sharad Tripathi and BJP MLA Rakesh Singh exchange blows after an argument broke out over placement of names on a foundation stone of a project pic.twitter.com/gP5RM8DgId
ಬಿಜೆಪಿ ಸ್ಥಳೀಯ ನಾಯಕರು ತಮ್ಮ ಮುಖಂಡರಿಬ್ಬರ ಈ ಜಗಳ ಬಿಡಿಸಲು ಸಹ ಮುಂದಾಗಿದ್ದು ಕಡೆಗೂ ಹಿರಿಯ ಪೋಲೀಸ್ ಅಧಿಕಾರಿಯೊಬ್ಬರು ಈ ಜಗಳ ಬಿಡಿಸಲು ಯಶಸ್ವಿಯಾಗಿದ್ದಾರೆ.
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಏರ್ಪಾಡಾಗಿದ್ದ ಸಭೆಯಲ್ಲೇ ಈ ಕಿತ್ತಾಟ ನಡೆದಿದ್ದು ಸಭೆಯಲ್ಲಿ ಹಲವಾರ ಹಿರಿಯ ಅಧಿಕಾರಿಗಳು ಸಹ ಭಾಗವಹಿಸಿದ್ದರು.ಇನ್ನು ಸಂಸದ-ಶಾಸಕರ ನಡುವಿನ ಈ ಜಗಳ, ಹಲ್ಲೆಯ ವೀಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಚಎಚೆಗೆ ಗ್ರಾಸವಾಗಿದೆ.