ದಕ್ಷಿಣ ದೆಹಲಿಯ ಸಿಜಿಒ ಕಾಂಪ್ಲೆಕ್ಸ್ ನಲ್ಲಿ ಪ್ರಮುಖ ಸರ್ಕಾರಿ ಕಚೇರಿಗಳಿದ್ದು, ಸಾಮಾಜಿಕ ನ್ಯಾಯ ಇಲಾಖೆಯ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 8:34 ರ ವೇಳೆಗೆ ಪಂಡಿತ್ ದೀನ ದಯಾಳ ಅಂತ್ಯೋದಯ ಭವನದ 5 ನೇ ಮಹಡಿಯಲ್ಲಿರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರ ಬಗ್ಗೆ ಅಗ್ನಿಶಾಮಕ ದಳ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣವೇ 25 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಪ್ರಾರಂಭಿಸಿವೆ. ಇತ್ತೀಚಿನ ವರದಿಯ ಪ್ರಕಾರ ಬೆಂಕಿಯನ್ನು ತಹಬದಿಗೆ ತರಲಾಗಿದ್ದು, ಘಟನೆಯಿಂದ ಉಂಟಾದ ನಷ್ಟವನ್ನು ಅಂದಾಜಿಸಲಾಗುತ್ತಿದೆ.