ಫೆಬ್ರವರಿ 14ರಂದು ಪುಲ್ವಾಮಾ ದಾಳಿಯಲ್ಲಿ ನಲವತ್ತಕ್ಕೆ ಹೆಚ್ಚು ಯೋಧರು ಹುತಾತ್ಮರಾದ ಬಳಿಕ ದೇಶಾದ್ಯಂತ ಕಾಶ್ಮೀರಿ ವ್ಯಕ್ತಿಗಳ ಮೇಲೆ ಹಲ್ಲೆ , ಕಿರುಕುಳದ ಘಟನೆಗಳು ವರದಿಯಾಗಿದೆ. ವಿಶೇಷವಾಗಿ ದೇಶದ ನಾನಾ ಭಾಗಗಳಲ್ಲಿ ಕಲಿಯುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆದ ಪ್ರಕರಣ ಬಹಿರಂಗವಾಗುತ್ತಿದೆ.