ಹೌದು... ದಶಕಗಳ ಕಾಲ ಹಿಂದೂ ಮತ್ತು ಮುಸ್ಲಿಂ ಬಾಂಧವರ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದ ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಸಂಧಾನದ ಮೂಲಕವೇ ವಿವಾದ ಇತ್ಯರ್ಥವಾಗಲಿದೆ ಎಂದು ಹೇಳಿದ್ದು, ಸಂಧಾನಕ್ಕಾಗಿ ಮೂವರು ಸದಸ್ಯರ ಸಮಿತಿಯನ್ನೂ ನೇಮಕ ಮಾಡಿ ಆದೇಶ ಹೊರಡಿಸಿದೆ. ಅಂತೆಯೇ ವಾರಗಳೊಳಗೆ ಸಂಧಾನ ಕುರಿತ ವರದಿ ನೀಡುವಂತೆ ಸಂಧಾನ ಸಮಿತಿಗೆ ಸೂಚನೆ ನೀಡಿದೆ.