ಭಾರತದ ಬ್ಯಾಂಕ್ ಗಳಲ್ಲಿ ಸಾಲ ಮರು ಪಾವತಿ ಮಾಡದೇ ವಿದೇಶಕ್ಕೆ ಪರಾರಿಯಾಗಿರುವ ಕೋಟ್ಯಧಿಪತಿ ನೀರವ್ ಮೋದಿ ಕರಾವಳಿ ನಿಯಂತ್ರಣ ವಲಯ ನಿಯಮಗಳು ಹಾಗೂ ಮಹಾರಾಷ್ಟ್ರದ ರಾಜ್ಯದ ನಿಯಮಾವಳಿಗಳನ್ನು ಉಲ್ಲಂಘಿಸಿ 33,000 ಚದರ ಅಡಿ ಐಷಾರಾಮಿ ಬಂಗಲೆಯನ್ನು ಅನಧಿಕೃತವಾಗಿ ಕಟ್ಟಿದ್ದರು. ಈ ಕಾರಣಕ್ಕಾಗಿ 2009ರಲ್ಲಿ ಶಂಭುರಾಜೆ ಯುವ ಕ್ರಾಂತಿ ಸಂಸ್ಥೆಯೊಂದು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಬಾಂಬೆ ಹೈಕೋರ್ಟ್ ನೀರವ್ ಮೋದಿ ನಿರ್ಮಿಸಿದ್ದ ಅನಧಿಕೃತ ಬಂಗಲೆಯನ್ನು ಕೆಡವು ಹಾಕಲು ಆದೇಶಿಸಿತ್ತು.