ಆಯೋಧ್ಯೆ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಧಾನ ಕುರಿತ ತನ್ನ ಅಂತಿಮ ತೀರ್ಪನ್ನು ಶುಕ್ರವಾರ ನೀಡಿರುವ ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠ. ಸಂಧಾನ ಸಮಿತಿಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಉತ್ತರ ಪ್ರದೇಶ ಸರ್ಕಾರವೇ ನೀಡಬೇಕು ಎಂದು ಸೂಚನೆ ನೀಡಿದೆ. ಅಲ್ಲದೆ ಸಂಧಾನ ಸಮಿತಿಗೆ ಹೆಚ್ಚುವರಿ ಸದಸ್ಯರ ಅಗತ್ಯಬಿದ್ದರೆ, ಆಗ ಸಂವಿಧಾನಿಕ ಪೀಠದ ಗಮನಕ್ಕೆ ತಂದು ಹೆಚ್ಚುವರಿ ಸಂಧಾನಕಾರರನ್ನು ಸಂಧಾನ ಸಮಿತಿಗೆ ಸೇರಿಸಿಕೊಳ್ಳಬಹುದು ಎಂದೂ ಪೀಠ ಸ್ಪಷ್ಟನೆ ನೀಡಿದೆ.