ನಿನ್ನೆಯಷ್ಟೇ ಸುಪ್ರೀಂ ಕೋರ್ಟ್, ಧರ್ಮ ಮತ್ತು ರಾಜಕೀಯದೊಂದಿಗೆ ತಳುಕು ಹಾಕಿಕೊಂಡಿರುವ ಅಯೋಧ್ಯೆಯ ರಾಮಜನ್ಮಭೂಮಿ-ಬಾಬರಿ ಮಸೀದಿ ಜಾಗದ ಒಡೆತನದ ವಿವಾದ ಇತ್ಯರ್ಥಕ್ಕೆ ನಿವೃತ್ತ ನ್ಯಾಯಮೂರ್ತಿ ಎಫ್.ಎಂ. ಇಬ್ರಾಹಿಂ ಖಲಿಫುಲ್ಲಾ, ಆರ್ಟ್ ಆಫ್ ಲಿವಿಂಗ್ ಫೌಂಡೇಷನ್ ಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಮತ್ತು ಹಿರಿಯ ವಕೀಲ ಶ್ರೀರಾಮ್ ಪಂಚು ಅವರನ್ನೊಳಗೊಂಡ ತ್ರಿ ಸದಸ್ಯ ಸಂಧಾನ ಸಮಿತಿ ರಚಿಸಿದೆ.