'ಸಶಸ್ತ್ರ ಪಡೆಗಳು ರಾಜಕೀಯ ರಹಿತವಾಗಿದ್ದು, ಸದಾ ಜಾತ್ಯತೀತ ತತ್ವಗಳನ್ನು ಅನುಸರಿಸುತ್ತವೆ. ಆದರೆ ಇತ್ತೀಚಿನ ಬೆಳವಣಿಗೆಳು ತೀರಾ ಆತಂಕಕಾರಿಯಾಗಿದ್ದು, ರಾಜಕೀಯ ಉದ್ದೇಶಕ್ಕೆ ಸೇನಾಪಡೆಗಳ ಬಳಕೆ ಸರಿಯಲ್ಲ. ಕೆಲವೇ ವಾರಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಇತ್ತೀಚಿನ ಘಟನೆಗಳನ್ನು ರಾಜಕೀಯ ಪಕ್ಷಗಳು ವಿಜಯ ಮತ್ತು ಹುಸಿರಾಷ್ಟ್ರಪ್ರೇಮದ ಸಂದೇಶವನ್ನಾಗಿ ಬಳಸಿಕೊಳ್ಳುವುದನ್ನು ತಡೆಯಬೇಕು ಎಂದು ಎನ್ ರಾಮದಾಸ್ ಹೇಳಿದ್ದಾರೆ.