ಚೆನ್ನೈ: ತಮಿಳುನಾಡು ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸೂಪರ್ ಸ್ಟಾರ್ ರಜಿನಿಕಾಂತ್ ಮಾತನಾಡಿದ್ದು ಸ್ಪಷ್ಟನೆ ನೀಡಿದ್ದಾರೆ.
ವಿಧಾನಸಭಾ ಚುನಾವಣೆಯೇ ತಮ್ಮ ಟಾರ್ಗೆಟ್ ಎಂದು ಹೇಳಿರುವ ರಜಿನಿಕಾಂತ್ 21 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆಗೆ ತಮ್ಮ ಪಕ್ಷ ಸ್ಪರ್ಧಿಸುವುದಿಲ್ಲ, ಯಾರನ್ನು ಬೆಂಬಲಿಸುತ್ತೇನೆ ಎಂಬುದನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ರಜಿನಿಕಾಂತ್ ಇನ್ನಷ್ಟೇ ತಮ್ಮ ರಾಜಕೀಯ ಪಕ್ಷವನ್ನು ಘೋಷಿಸಬೇಕಿದೆ. ಆದರೆ ರಾಜಕೀಯ ಎಂಟ್ರಿಯನ್ನು ಈಗಾಗಲೇ ಘೋಷಿಸಿದ್ದಾರೆ. ತಮಿಳುನಾಡು ಎದುರಿಸುತ್ತಿರುವ ನೀರಿನ ಸಮಸ್ಯೆಯನ್ನು ಬಗೆಹರಿಸುವವರಿಗೆ ಮತಚಲಾಯಿಸಿ ಎಂದು ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.