ಬಾಲಾಕೋಟ್ ವೈಮಾನಿಕ ದಾಳಿ ಮತ್ತೆ ಮೋದಿ ಸರ್ಕಾರ ಬರಲು ಸಹಾಯವಾಗುತ್ತೆ: ಯೋಗಿ

ಕಳೆದ ತಿಂಗಳು ಪಾಕಿಸ್ತಾನದ ಉಗ್ರ ನೆಲೆ ಬಾಲಾಕೋಟ್ ಮೇಲೆ ನಡೆದ ವೈಮಾನಿಕ ದಾಳಿ ಕೇಂದ್ರದಲ್ಲಿ ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ ಸಹಾಯವಾಗುತ್ತದೆ ...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಕ್ನೋ: ಕಳೆದ ತಿಂಗಳು ಪಾಕಿಸ್ತಾನದ ಉಗ್ರ ನೆಲೆ ಬಾಲಾಕೋಟ್ ಮೇಲೆ ನಡೆದ ವೈಮಾನಿಕ ದಾಳಿ ಕೇಂದ್ರದಲ್ಲಿ ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ ಸಹಾಯವಾಗುತ್ತದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಯೋಗಿ. ಆದಿತ್ಯನಾಥ್, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನ ನೆಲದ ಮೇಲೆ ನಡೆಸಿದ ವೈಮಾನಿಕ ದಾಳಿ ಮಹತ್ವವಾದದ್ದು, ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ನರೇಂದ್ರ ಮೋದಿ ಗೆಲುವು ಸಾಧಿಸಲು ಸಹಾಯವಾಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.
ನಿನ್ನೆ ತಮ್ಮ ಟ್ವೀಟರ್ ನಲ್ಲಿ ಸರಣಿ ಟ್ವಿಟ್ ಮಾಡಿದ್ದ ಯೋಗಿ ಆದಿತ್ಯನಾಥ್ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಜೊತೆಗೆ 2019ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಸುಮಾರು  74 ಸೀಟುಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com