ಕಳೆದ ವಾರವಷ್ಟೇ ಅಯೋಧ್ಯ ಭೂ ವಿವಾದ ಸಂಬಂಧ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಸಂಧಾನದ ಮೂಲಕವೇ ವಿವಾದ ಬಗೆಹರಿಯಬೇಕು ಎಂದು ಹೇಳಿತ್ತು. ಅಲ್ಲದೆ ಇದಕ್ಕೆ ಸಂಧಾನ ಸಮಿತಿ ಕೂಡ ನೇಮಕ ಮಾಡಿ ಕೆಲ ಷರತ್ತುಗಳನ್ನೂ ಕೂಡ ವಿಧಿಸಿತ್ತು. ಪ್ರಮುಖವಾಗಿ ಯಾವುದೇ ಕಾರಣಕ್ಕೂ ಸಂಧಾನ ಪ್ರಕ್ರಿಯೆಯನ್ನು ಮಾಧ್ಯಮಗಳು ವರದಿ ಮಾಡಬಾರದು ಎಂದು ಹೇಳಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರು, ಈ ಸಂಬಂಧ ಸಂಧಾನಕಾರರು ಎಚ್ಚರದಿಂದರಿಬೇಕು ಎಂದು ಹೇಳಿದೆ. ಅಲ್ಲದೆ ಸಂಧಾನ ಪ್ರಕ್ರಿಯೆಯ ಎಲ್ಲ ಮಾಹಿತಿಗಳೂ ಗೌಪ್ಯವಾಗಿರಬೇಕಿದ್ದು, ಈ ಕುರಿತು ಸಂಪೂರ್ಣ ಜವಾಬ್ದಾರಿ ಸಂಧಾನ ಸಮಿತಿಯದ್ದೇ ಆಗಿರುತ್ತದೆ ಎಂದೂ ಸುಪ್ರೀಂ ಕೋರ್ಟ್ ನ ಪಂಚ ಸದಸ್ಯ ಸಂವಿಧಾನಿಕ ಪೀಠ ಹೇಳಿದೆ.