ಕೂಡಲೇ ಪೋಸ್ಟರ್ ನ್ನು ತೆಗೆದುಹಾಕಿ ನಾಳೆಯೊಳಗೆ ಉತ್ತರಿಸುವಂತೆ ಚುನಾವಣಾ ಆಯೋಗ ತಿಳಿಸಿದೆ. ಶಾಸಕ ಶರ್ಮ ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ ಪೋಸ್ಟರ್ ನಲ್ಲಿ ಪ್ರಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಜೊತೆಗೆ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಫೋಟೋಗಳನ್ನು ಹಾಕಿ ಪಾಕಿಸ್ತಾನ ನಮಗೆ ತಲೆಬಾಗಿದೆ. ನಮ್ಮ ಧೈರ್ಯಶಾಲಿ ಸೈನಿಕರು ಅವರಿಗೆ ತಕ್ಕ ಶಾಸ್ತಿ ನೀಡಿದ್ದಾರೆ. ಇದೊಂದು ಬಹುದೊಡ್ಡ ರಾಜತಾಂತ್ರಿಕ ಗೆಲುವು, ಮೋದಿಯವರು ಅಭಿನಂದನ್ ಅವರನ್ನು ಅತ್ಯಲ್ಪ ಸಮಯದಲ್ಲಿಯೇ ಭಾರತಕ್ಕೆ ಕರೆತಂದಿದ್ದಾರೆ ಎಂದು ಪೋಸ್ಟರ್ ನಲ್ಲಿ ತಿಳಿಸಿದ್ದಾರೆ.