ದೇಶದ ಸೈನಿಕರಿಗೆ ನೀಡುವ ಅತ್ಯುನ್ನತ ಗೌರವಕ್ಕೆ ಭಾರತೀಯ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪಾತ್ರರಾಗಿದ್ದು, ಅವರಿಗೆ ಪರಮ ವಿಶಿಷ್ಠ ಸೇವಾ ಪದಕ ಘೋಷಣೆ ಮಾಡಲಾಗಿದೆ. ಅಂತೆಯೇ ಇತ್ತೀಚೆಗೆ ಕಣಿವೆ ರಾಜ್ಯ ಕಾಶ್ಮೀರದ ಕುಪ್ವಾರದಲ್ಲಿ ನಡೆದ ಉಗ್ರರ ವಿರುದ್ಧದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರ ಹೆಡೆ ಮುರಿಕಟ್ಟಿದ 20 ಜಾಟ್ ರೆಜಿಮೆಂಟ್ ನ ಮೇಜರ್ ತುಷಾರ್ ಗೌಬಾ ಅವರಿಗೆ ಕೀರ್ತಿ ಚಕ್ರ ಪದಕ ಘೋಷಣೆ ಮಾಡಲಾಗಿದೆ.