ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಯಾವತಿ, ಬಿಜೆಪಿ ಮತ್ತು ಅದರ ಮೈತ್ರಿ ಕೂಟವನ್ನು ಮಣಿಸಲು ಎಸ್ ಪಿ ಮತ್ತು ಬಿಎಸ್ ಪಿ ಮೈತ್ರಿ ಕೂಟ ಶಕ್ತವಾಗಿದೆ. ನಮ್ಮ ಸ್ವಂತ ಬಲದಿಂದಲೇ ನಾವು ಬಿಜೆಪಿಯನ್ನು ಮಣಿಸುತ್ತೇವೆ. ಇದೇ ವೇಳೆ 7 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದೇ ಇರಲು ನಿರ್ಧರಿಸಿರುವ ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಪರೋಕ್ಷವಾಗಿ ಟೀಕಿಸಿರುವ ಮಾಯಾವತಿ, ಇಂತಹ ನಿರ್ಧಾರಗಳಿಂದ ಕಾರ್ಯಕರ್ತರ ದಾರಿ ತಪ್ಪಿಸಬಾರದು. ಇದರಿಂದ ಅನಗತ್ಯ ಗೊಂದಲ ವೇರ್ಪಡುತ್ತದೆ. ಕಾಂಗ್ರೆಸ್ ಪಕ್ಷ ಬೇಕಿದ್ದರೆ ಎಲ್ಲ 80 ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿ. ಈ ಬಗ್ಗೆ ತಮಗೆ ಯಾವುದೇ ರೀತಿಯ ತಕರಾರಿಲ್ಲ ಎಂದು ಹೇಳಿದ್ದಾರೆ.