ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ನಿಧನ ಹೊಂದುತ್ತಿದ್ದಂತೆಯೇ, ರಾಜಕೀಯ ಅಸ್ಥಿರತೆ ತಲೆದೋರಿದ್ದ, ಸಾಧ್ಯತೆ ಇದೆ. ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಬಿಜೆಪಿ ಹಾಗೂ ಮಿತ್ರ ಪಕ್ಷದಲ್ಲಿ ಗೊಂದಲವಿದೆ. ಆದರೆ, ಪರ್ರಿಕರ್ ಅವರ ಅಂತ್ಯ ಸಂಸ್ಕಾರ ಆಗುವ ಮುನ್ನವೇ, ರಾಜ್ಯದಲ್ಲಿ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್ ಸರ್ಕಾರ ರಚಿಸಲು ಹಕ್ಕು ಮಂಡನೆ ಪತ್ರ ಸಲ್ಲಿಸಿದ್ದು, ಅತೀವ ಟೀಕೆಗೆ ಗುರಿಯಾಗಿದೆ.