ಪದಗ್ರಹಣದ ಬಳಿಕ ಮಾತನಾಡಿರುವ ಪ್ರಮೋದ್ ಸಾವಂತ್, ಪಕ್ಷ ನನ್ನ ಹೆಗಲಿಗೆ ಬಹುದೊಡ್ಡ ಜವಾಬ್ದಾರಿಯನ್ನು ಹೊರೆಸಿದೆ. ನಾನು ಈ ರಾಜಕೀಯದಲ್ಲಿ ಏನಾದರೂ ಆಗಿದ್ದರೆ ಅದು ಮನೋಹರ್ ಪರಿಕ್ಕರ್ ಅವರಿಂದಲೇ, ಅವರೇ ನನ್ನನ್ನು ರಾಜಕೀಯವಾಗಿ ಬೆಳೆಸಿದವರು, ನಾನು ಗೋವಾ ವಿಧಾನಸಭೆ ಸ್ಪೀಕರ್ ಆಗಿದ್ದೂ ಸಹ ಮನೋಹರ್ ಪರಿಕ್ಕರ್ ಅವರಿಂದಲೇ ಎಂದು ಹೇಳಿದ್ದಾರೆ.