ಪುಲ್ವಾಮಾ ಪ್ರತೀಕಾರ ಇನ್ನೂ ಮುಗಿದಿಲ್ಲ, ಪಾಕ್ ಗೆ ಮತ್ತಷ್ಟು ಸರ್ಜಿಕಲ್ ಸ್ಟ್ರೈಕ್ ಎಚ್ಚರಿಕೆ ಕೊಟ್ಟ ಅಜಿತ್ ಧೋವಲ್!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರಿಗೆ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅಜಿತ್ ಧೋವಲ್...
ಅಜಿತ್ ಧೋವಲ್
ಅಜಿತ್ ಧೋವಲ್
ಗುರುಗ್ರಾಮ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರಿಗೆ ನಮನ ಸಲ್ಲಿಸಿದ ಬಳಿಕ ಮಾತನಾಡಿದ ಅಜಿತ್ ಧೋವಲ್ ಅವರು ಪುಲ್ವಾಮಾ ದಾಳಿಯ ಪ್ರತೀಕಾರ ಇನ್ನೂ ಮುಗಿದಿಲ್ಲ ಎಂದು ಹೇಳುವ ಮೂಲಕ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಿಆರ್ಪಿಎಫ್ ನ 80 ವರ್ಷಾಚರಣೆಯಲ್ಲಿ ಪಾಲ್ಗೊಂಡ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಪುಲ್ವಾಮಾದಲ್ಲಿನ ಯೋಧರ ಬಲಿದಾನ ಅತ್ಯಂತ ಪ್ರಮುಖವಾಗಿದ್ದು ಇದನ್ನು ಭಾರತ ದೇಶ ಹಾಗೂ ಭಾರತೀಯರು ಯಾವತ್ತೂ ಮರೆಯುವುದಿಲ್ಲ ಎಂದಿದ್ದಾರೆ.
ಪುಲ್ವಾಮಾ ದಾಳಿಯ ಪ್ರತೀಕಾರ ಇನ್ನೂ ಮುಗಿದಿಲ್ಲ. ಉಗ್ರರು ಸಂಪೂರ್ಣ ನಿರ್ನಾಮವಾಗುವವರೆಗೆ ಸರ್ಜಿಕಲ್ ಸ್ಟ್ರೈಕ್ ಗಳು ಮುಂದುವರಿಯಲಿದೆ. ಯಾವ ಸಂದರ್ಭದಲ್ಲಿ ಯಾವ ರೀತಿಯ ಪ್ರತ್ಯುತ್ತರ ನೀಡಬೇಕು ಎನ್ನುವ ನಿರ್ಧಾರವನ್ನು ಕೈಗೊಳ್ಳುವ ಸಾಮರ್ಥ್ಯ ನಮ್ಮ ನಾಯಕರಿಗಿದೆ ಎಂದು ಅಜಿತ್ ಧೋವಲ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com