ಹೋಳಿ ಆಚರಣೆ ವೇಳೆ ಬಿಜೆಪಿ ಶಾಸಕನ ಮೇಲೆ ಗುಂಡಿನ ದಾಳಿ, ಕಾಲಿಗೆ ಗಾಯ

ಪಕ್ಷದ ಕಚೇರಿಯಲ್ಲಿ ಹೋಳಿ ಆಚರಿಸುತ್ತಿದ್ದ ವೇಳೆ ಉತ್ತರ ಪ್ರದೇಶದ ಲಕಿಂಪುರ್​ ಕ್ಷೇತ್ರದ ಬಿಜೆಪಿ ಶಾಸಕ ಯೋಗೇಶ್​ ವರ್ಮಾ ಅವರ ಮೇಲೆ ಗುರುವಾರ...
ಯೋಗೇಶ್ ವರ್ಮಾ
ಯೋಗೇಶ್ ವರ್ಮಾ
ಲಖನೌ: ಪಕ್ಷದ ಕಚೇರಿಯಲ್ಲಿ ಹೋಳಿ ಆಚರಿಸುತ್ತಿದ್ದ ವೇಳೆ ಉತ್ತರ ಪ್ರದೇಶದ ಲಕಿಂಪುರ್​ ಕ್ಷೇತ್ರದ ಬಿಜೆಪಿ ಶಾಸಕ ಯೋಗೇಶ್​ ವರ್ಮಾ ಅವರ ಮೇಲೆ ಗುರುವಾರ ಗುಂಡಿನ ದಾಳಿ ನಡೆದಿದ್ದು, ಗಾಯಗೊಂಡ ಶಾಸಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಲಕಿಂಪುರ್ ಬಿಜೆಪಿ ಕಚೇರಿಯಲ್ಲಿ ಹೋಳಿ ಆಚರಿಸುತ್ತಿದ್ದ ಶಾಸಕರ ಹಾಗೂ ಕಾರ್ಯಕರ್ತರ ನಡುವ ತೀವ್ರಾ ವಾಗ್ವಾದ ನಡೆದಿದೆ. ಈ ವೇಳೆ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದು, ಅದು ಶಾಸಕರ ಕಾಲಿಗೆ ತಗುಲಿದೆ. ಶಾಸಕರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಅಪಾಯ ಇಲ್ಲ ಎಂದು ಲಕಿಂಪುರ್​ ಜಿಲ್ಲಾಧಿಕಾರಿ ಎಸ್ ಸಿಂಗ್ ಅವರು ತಿಳಿಸಿದ್ದಾರೆ.
ಯೋಗೇಶ್​ ವರ್ಮಾ ಅವರು ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳ ಜತೆ ಹೋಳಿ ಹಬ್ಬವನ್ನು ಆಚರಿಸುತ್ತಿದ್ದರು. ಪರಸ್ಪರ ಬಣ್ಣ ಎರಚಿಕೊಂಡು ಸಂಭ್ರಮಿಸುತ್ತಿದ್ದರು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ಮಾಡಿದ್ದಾನೆ. ಗುಂಪು ದೊಡ್ಡದಾಗಿದ್ದರಿಂದ, ದಾಳಿ ಮಾಡಿದವರು ಯಾರು ಎಂಬುದು ತಕ್ಷಣವೇ ಗೊತ್ತಾಗಿಲ್ಲ. ಈ ಕುರಿತು ತನಿಖೆ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com