ಫೆಬ್ರವರಿ 14ರಂದು ಸ್ಫೋಟಕ ತುಂಬಿದ್ದ ವಾಹನವನ್ನು ಚಲಾಯಿಸಿ 78 ಮಂದಿಯಿದ್ದ ಸಿಆರ್ಪಿಎಫ್ ಬೆಂಗಾವಲು ಪಡೆ ಯೋಧರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಜೈಷ್ ಎ ಮೊಹಮ್ಮದ್ ಉಗ್ರ ಡಿಕ್ಕಿ ಹೊಡೆದಿದ್ದ. ಆ ಆತ್ಮಾಹುತಿ ದಾಳಿಯಲ್ಲಿ 40 ಯೋಧರು ಹುತಾತ್ಮರಾಗಿದ್ದರು. ಬಳಿಕ ಫೆಬ್ರವರಿ 26ರಂದು ಭಾರತೀಯ ವಾಯುಪಡೆ ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಏರ್ ಸ್ಟ್ರೈಕ್ ದಾಳಿ ನಡೆಸಿತ್ತು.