ಇಂದು ಕಡಪದಲ್ಲಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರೊಂದಿಗೆ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಫಾರೂಕ್ ಅಬ್ದುಲ್ಲಾ, ಜಗನ್ ಮೋಹನ್ ರೆಡ್ಡಿ ಕೆಲವು ವರ್ಷಗಳ ಹಿಂದೆ ತಮ್ಮನ್ನು ಭೇಟಿಯಾಗಿ, ಅವರನ್ನು ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಲು ಹೈಕಮಾಂಡ್ಗೆ 1500 ಕೋಟಿ ರೂ. ನೀಡುವ ಪ್ರಸ್ತಾಪ ಮುಂದಿಟ್ಟಿದ್ದರು. ಇಷ್ಟೊಂದು ಹಣ ಎಲ್ಲಿಂದ ಅವರಿಗೆ ಸಿಕ್ಕಿದೆ ಎಂದು ಆಶ್ಚರ್ಯವಾಯಿತು. ಒಂದು ವೇಳೆ ಜನರು ಅವರನ್ನು ಆಯ್ಕೆ ಮಾಡಿದರೆ, ರಾಜ್ಯದ ಪರಿಸ್ಥಿತಿ ಹದಗೆಡುತ್ತಿತ್ತು ಎಂದು ಹೇಳಿದರು.