ಬಿಜೆಪಿಯ ಬೆದರಿಕೆ ರಾಜಕಾರಣ ಮತ್ತೊಮ್ಮೆ ಸಾಬೀತು, ಎಲ್ಲ ಮೈತ್ರಿ ಪಕ್ಷಗಳಿಗೂ ಇದು ಎಚ್ಚರಿಕೆ: ಗೋವಾ ಕಾಂಗ್ರೆಸ್

ಬಿಜೆಪಿ ವಿರುದ್ಧ ಕಿಡಿಕಾರಿರುವ ಗೋವಾ ಕಾಂಗ್ರೆಸ್, ಬಿಜೆಪಿಯ ಬೆದರಿಕೆ ರಾಜಕಾರಣ ಮತ್ತೊಮ್ಮೆ ಸಾಬೀತು, ಎಲ್ಲ ಮೈತ್ರಿ ಪಕ್ಷಗಳಿಗೂ ಇದು ಎಚ್ಚರಿಕೆ ಕರೆಗಂಟೆ ಎಂದು ಹೇಳಿದೆ.
ಗೋವಾ ಕಾಂಗ್ರೆಸ್ ನ ಮುಖಂಡ ಸುನಿಲ್ ಕಾವ್ತಂಕರ್
ಗೋವಾ ಕಾಂಗ್ರೆಸ್ ನ ಮುಖಂಡ ಸುನಿಲ್ ಕಾವ್ತಂಕರ್
ಪಣಜಿ: ಗೋವಾದಲ್ಲಿ ರಾತ್ರೋ ರಾತ್ರಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆ ಮತ್ತೊಂದು ಸುತ್ತಿನ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಈ ಬಗ್ಗೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಗೋವಾ ಕಾಂಗ್ರೆಸ್, ಬಿಜೆಪಿಯ ಬೆದರಿಕೆ ರಾಜಕಾರಣ ಮತ್ತೊಮ್ಮೆ ಸಾಬೀತು, ಎಲ್ಲ ಮೈತ್ರಿ ಪಕ್ಷಗಳಿಗೂ ಇದು ಎಚ್ಚರಿಕೆ ಕರೆಗಂಟೆ ಎಂದು ಹೇಳಿದೆ.
ಬಿಜೆಪಿ ಮೈತ್ರಿ ಪಕ್ಷ ಎಂಜಿಪಿಯ ಇಬ್ಬರು ಶಾಸಕರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಇದರು ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಗೋವಾ ಕಾಂಗ್ರೆಸ್ ನ ಮುಖಂಡ ಸುನಿಲ್ ಕಾವ್ತಂಕರ್ ಅವರು, ಬಿಜೆಪಿ ಕರಾಳ ಮುಖ ಮತ್ತೊಮ್ಮೆ ಬಯಲಾಗಿದೆ. ಎಂಜಿಪಿ ಇಬ್ಬರು ಶಾಸಕರನ್ನು ಸೆಳೆಯುವ ಮೂಲಕ ಬಿಜೆಪಿ ಮತ್ತೊಮ್ಮೆ ತನ್ನ ಬೆದರಿಕೆ ರಾಜಕೀಯವನ್ನು ಮುಂದುವರೆಸಿದೆ. ನಿಜಕ್ಕೂ ಎಲ್ಲ ಮೈತ್ರಿ ಪಕ್ಷಗಳಿಗೂ ಇದು ಎಚ್ಚರಿಕೆಯ ಕರೆಗಂಟೆ ಎಂದು ಅವರು ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com