ಎ-ಸ್ಯಾಟ್ ಆ್ಯಂಟಿ ಸ್ಯಾಟೆಲೈಟ್ ಮಿಸೈಲ್ ಮೂಲಕ ಬಾಹ್ಯಾಕಾಶದಲ್ಲೇ ಸಕ್ರಿಯ ಉಪಗ್ರಹವನ್ನು ಹೊಡೆದುರುಳಿಸಿದ ಡಿಆರ್ ಡಿಒ ವಿಜ್ಞಾನಿಗಳಿಗೆ ಕಾಂಗ್ರೆಸ್ ಅಭಿನಂದನೆ ಸಲ್ಲಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಸಾಧನೆ ಕುರಿತು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿ ಮಾಹಿತಿ ನೀಡಿದ ಬೆನ್ನಲ್ಲೇ ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ಡಿಆರ್ ಡಿಒ, ಇಸ್ರೋ ವಿಜ್ಞಾನಿಗಳ ಅಭೂತಪೂರ್ವ ಸಾಧನೆಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದೆ.