ಬಿಹಾರದ ದುಮಾರಿಯಾದಲ್ಲಿ ಈ ಘಟನೆ ನಡೆದಿದ್ದು, ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಬೇಕೆಂದು ಆಗ್ರಹಿಸಿರುವ ನಕ್ಸಲೀಯರು ಬುಧವಾರ ತಡರಾತ್ರಿ ಡೈನಾಮೈ ಟ್ ಸ್ಫೋಟಗೊಳಿಸಿ ಬಿಜೆಪಿ ಮುಖಂಡ ಅಂಜು ಕುಮಾರ್ ಸಿಂಗ್ ಮನೆಯನ್ನು ಧ್ವಂಸಗೊಳಿಸಿದ್ದಾರೆ. ಮನೆಯ ಎದುರುಭಾಗದ ಗೋಡೆ ಒಡೆದು ಛಿದ್ರವಾಗಿ ಹೋಗಿದೆ. ಅಂತೆಯೇ ಬಿಜೆಪಿ ಮುಖಂಡ ಅಂಜು ಕುಮಾರ್ ಗಾಯಗೊಂಡಿದ್ದು, ಯಾವುದೇ ಸಾವು ಸಂಭವಿಸಿಲ್ಲ ಎಂದು ವರದಿ ವಿವರಿಸಿದೆ.