ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ಆರ್ ಸಿ ಜಾರಿ: ಅಮಿತ್ ಶಾ

ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ ಆರ್ ಸಿ ಜಾರಿಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.
ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ಆರ್ ಸಿ ಜಾರಿ: ಅಮಿತ್ ಶಾ
ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ಆರ್ ಸಿ ಜಾರಿ: ಅಮಿತ್ ಶಾ
ಅಲಿಪುರ್ದಾರ್: ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ ಆರ್ ಸಿ ಜಾರಿಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ. 
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಮಮತಾ ಬ್ಯಾನರ್ಜಿ ಅಕ್ರಮ ವಲಸಿಗರನ್ನು ಚುನಾವಣೆ ಗೆಲ್ಲುವುದಕ್ಕೆ ಸಹಕಾರಿ ಎಂದುಕೊಂಡಿದ್ದಾರೆ. ಆದರೆ ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲಿ ಎನ್ ಆರ್ ಸಿ ಜಾರಿಗೊಳಿಸಿ ಅಕ್ರಮ ವಲಸಿಗರನ್ನು ವಾಪಸ್ ಕಳಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. 
ಬಿಜೆಪಿ ರಾಜ್ಯದಲ್ಲಿ 23 ಲೋಕಸಭಾ ಕ್ಷೇತ್ರಗಳನ್ನು ಗೆದ್ದರೆ ಮತ ಬ್ಯಾಂಕ್ ರಾಜಕಾರಣವಕ್ಕೆ ಅಂತ್ಯ ಹಾಡಲಿದೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com