ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಆರ್ಟಿಕಲ್ 35 A ಕುರಿತು ಮಾತನಾಡಿದ್ದ ಅರುಣ್ ಜೇಟ್ಲಿ, ಸಂವಿಧಾನದ ಈ ಅಂಶ ಜಮ್ಮು-ಕಾಶ್ಮೀರದ ಅಭಿವೃದ್ಧಿಗೆ ವಿರುದ್ಧವಾಗಿದೆ ಎಂದಿದ್ದರು. ಈ ಬೆನ್ನಲ್ಲೇ ಮೆಹಬೂಬಾ ಮುಫ್ತಿ ಹೇಳಿಕೆ ನೀಡಿದ್ದು, ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 35A ರದ್ದುಗೊಂಡರೆ ಜಮ್ಮು-ಕಾಶ್ಮೀರ ಭಾರತವನ್ನು ತೊರೆಯಬೇಕಾಗುವುದರ ಬಗ್ಗೆ ಜನತೆ ಅನಿವಾರ್ಯವಾಗಿ ಚಿಂತಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.