ಏಪ್ರಿಲ್ 4ರಂದು ಸುಮಲತಾ ಅಂಬರೀಷ್ ಪರ ಎಸ್ಎಂ ಕೃಷ್ಣ ಪ್ರಚಾರ

ಮಂಡ್ಯ ಲೋಕಸಭಾ ಚುನಾವಣೆಯ ಅಖಾಡಕ್ಕೆ ಧುಮುಕಿದ ಮಾಜಿ ಮುಖ್ಯಮಂತ್ರಿ ಬಿಜೆಪಿ, ನಾಯಕ ಎಸ್ ಎಂ ಕೃಷ್ಣ ಅವರು ಏಪ್ರಿಲ್ 4ರಂದು ಪಕ್ಷೇತರ ಅಭ್ಯರ್ಥಿ...
ಎಸ್ಎಂ ಕೃಷ್ಣ
ಎಸ್ಎಂ ಕೃಷ್ಣ
ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯ ಅಖಾಡಕ್ಕೆ ಧುಮುಕಿದ ಮಾಜಿ ಮುಖ್ಯಮಂತ್ರಿ ಬಿಜೆಪಿ, ನಾಯಕ ಎಸ್ ಎಂ ಕೃಷ್ಣ ಅವರು ಏಪ್ರಿಲ್ 4ರಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆ.
ಇಂದು ಕೇಂದ್ರ ಸಚಿವ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ ವಿ ಸದಾನಂದಗೌಡ ಅವರ ಪರ ಪ್ರಚಾರ ಮಾಡಿದ ಎಸ್ಎಂ ಕೃಷ್ಣ ಅವರು, ಪಕ್ಷದ ನಿರ್ದೇಶನದಂತೆ ತಾವು ಪ್ರಚಾರ ಮಾಡುತ್ತಿದ್ದು, ಏಪ್ರಿಲ್ 4ರಂದು ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.
ಜನ ಬಿಜೆಪಿಗೆ ಮತ ಹಾಕುವ ಮೂಲಕ ದೇಶದ ಅಭಿವೃದ್ಧಿಗೆ ದಾರಿ ಮಾಡಿಕೊಡಬೇಕು ಎಂದು ಮಾಜಿ ಸಿಎಂ ಮತದಾರರಿಗೆ ಮನವಿ ಮಾಡಿದರು.
ಸುಮಲತಾ ಅವರು ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ನಂತರ ಪಕ್ಷೇತರ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ವಿರುದ್ಧ ಸ್ಪರ್ಧಿಸಿದ್ದು, ಅವರಿಗೆ ಬಿಜೆಪಿ ಬೆಂಬಲ ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com